
ಸಕಲೇಶಪುರ :- ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋದಿಸಿ ಕರ್ನಾಟಕ ಬಂದ್ ಗೆ ಕರೆಕೊಟ್ಟ ಹಿನ್ನಲೆಯಲ್ಲಿ ಸಕಲೇಶಪುರ ತಾಲೂಕು ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಸಕಲೇಶಪುರ ಬಂದ್ ಗೆ ಕರೆಕೊಟ್ಟಿದ್ದನ್ನು ಬೆಂಬಲಿಸಿದ ವರ್ತಕರು, ಆಟೋ ಚಾಲಕರು ಮತ್ತು ಮಾಲೀಕರು, ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರು ,ಎಲ್ಲಾ ಕನ್ನಡ ಪರ ,ಜನಪರ ಸಂಘಟನೆಗಳ ಮುಖಂಡರಿಗೆ ಪೊಲೀಸ್ ಇಲಾಖೆಯವರಿಗೆ ಹಾಗೂ ಸಲಹೆ ಸಹಕಾರ ನೀಡಿದ ಮಾದ್ಯಮ ಮಿತ್ರರಿಗೆ ತಾಲೂಕು ಕರವೇ ಪ್ರವೀಣ್ ಶೆಟ್ಟಿ ಬಣದ ಅದ್ಯಕ್ಷ ರಮೇಶ್ ಪೂಜಾರಿ ಹಾಗೂ ಕರವೇ ಪದಾಧಿಕಾರಿಗಳು ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

