
ವಿಧಾನ ಸೌಧ :-ಸಕಲೇಶಪುರ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಕಂದಾಯ ಸಚಿವರ ಆಪ್ತ ಕಾರ್ಯದರ್ಶಿಯಾದ ಡಾ. ರವಿ ರವರನ್ನು ವಿಧಾನಸೌಧದ ಕಛೇರಿಯಲ್ಲಿ ಭೇಟಿಯಾಗಿ ಆಲೂರು ತಾಲೂಕನ್ನು ಬರ ಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಹಾಗೂ ತುರ್ತಾಗಿ ತಹಸೀಲ್ದಾರ್ ನೇಮಕ ಮಾಡಬೇಕೆಂದು ಮನವಿ ಸಲ್ಲಿಸಲಾಯಿತು.
ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
