
ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಇದರ ಅಡಿಯಲ್ಲಿ ಬರುವ ಕೃಷಿ ಮಹಾವಿದ್ಯಾಲಯ, ಕಾರೇಕೆರೆ, ಹಾಸನದ ವತಿಯಿಂದ ಆಯೋಜಿಸಲಾದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2023-24ರ ಅಂಗವಾಗಿ ಗ್ರಾಮಸ್ಥರ ಜೊತೆಗಿನ ಒಡನಾಟ ಹೆಚ್ಚಿಸಲು ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳಿಂದ ದೊಡ್ಡಯರಗನಾಳು ಗ್ರಾಮದಲ್ಲಿ ‘ದಸರಾ ಕ್ರೀಡಾಕೂಟ’ವನ್ನು ಆಯೋಜಿಸಲಾಯಿತು.
ಎಲ್ಲಾ ವಯಸ್ಕರ ಭಾಗವಹಿಸುವಿಕೆಗಾಗಿ ವಿವಿಧ ಮನರಂಜನೆ ಕ್ರೀಡೆಗಳನ್ನು ಏರ್ಪಡಿಸಲಾಗಿತ್ತು. ಎಲ್ಲಾ ಕ್ರೀಡೆಗಳಲ್ಲು ಉಲ್ಲಾಸ ಹಾಗೂ ಉತ್ಸುಕತೆಯಿಂದ ಗ್ರಾಮಸ್ಥರು ಪಾಲ್ಗೊಂಡರು. ವಿದ್ಯಾರ್ಥಿಗಳ ಈ ಪ್ರಯತ್ನವು ಗ್ರಾಮಸ್ಥರ ಪ್ರಶಂಸೆಗೆ ಪಾತ್ರವಾಯಿತು.
ಈ ಕಾರ್ಯಕ್ರಮದಲ್ಲಿ ಕೃಷಿ ಮಹಾವಿದ್ಯಾಲಯದ ದೈಹಿಕ ಶಿಕ್ಷಕರಾದ ಶ್ರೀ ಜಗದೀಶ್ ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ. ಸದಾಶಿವನಗೌಡ. ಎಸ್. ಎನ್. ಓ. ರವರು ಹಾಜರಿದ್ದು ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.


