ಸಕಲೇಶಪುರ: ಪಟ್ಟಣದ ಸುಭಾಷ್ ಮೈದಾನದಲ್ಲಿ ನಡೆದ 50ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಏಕಪಕ್ಷೀಯವಾಗಿ ತಮಗೆ ಬೇಕಾದವರಿಗೆ ಸನ್ಮಾನ ಮಾಡಲಾಗಿರುವುದು ಖಂಡನೀಯ,

ಮುಂದಿನ ದಿನಗಳಲ್ಲಿ ತಾಲ್ಲೂಕು ಆಡಳಿತದ ಎಲ್ಲಾ ಕಾರ್ಯಕ್ರಮಗಳಿಗೆ ಬಹಿಷ್ಕಾರ ಮಾಡಲಾಗುವುದು ಎಂದು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜೈಭೀಮ್ ಮಂಜು ಹೇಳಿಕೆ ನೀಡಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಇತ್ತೀಚೆಗೆ ಸಕಲೇಶಪುರ ತಾಲ್ಲೂಕಿಗೆ ತಹಸೀಲ್ದಾರ್ ಆಗಿ ವರ್ಗಾವಣೆಯಾಗಿ ಬಂದಿರುವ ಪುರಂದರ್ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಪತ್ರಕರ್ತರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದವರನ್ನು ಕಡೆಗಣಿಸಿ ಹೊರ ಊರಿನೋರ್ವರನ್ನು ಸನ್ಮಾನ ಮಾಡಿರುವುದು ಖಂಡನೀಯ.

ಶಾಸಕ ಸಿಮೆಂಟ್ ಮಂಜುರವರ ಗಮನಕ್ಕೂ ತರದೆ ತಮಗೆ ಬೇಕಾದವರಿಗೆ ಸನ್ಮಾನ ಮಾಡಿಸಿದ್ದಾರೆ.

ಪುರಂದರ್ ತಹಸೀಲ್ದಾರ್ ಆಗಿ ಬಂದ ನಂತರ ತಾಲೂಕಿನ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಚಾರ ಮಿತಿಮೀರಿದ್ದು , ಜನಸಾಮಾನ್ಯರು ಸಣ್ಣಪುಟ್ಟ ಕೆಲಸಗಳಿಗೂ ಲಂಚ ಕೊಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪೋಲಿಸ್ ಇಲಾಖೆಗಂತೂ ಜನಸಾಮಾನ್ಯರು ಹೋಗದಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಹಲವು ಅಧಿಕಾರಿಗಳು ಅಕ್ರಮ ಮರಳುಗಾರಿಕೆ ಮಾಡುವರ ಜೊತೆ ಶಾಮೀಲಾಗಿದ್ದು ಈ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತದ ವಿರುದ್ದ ಮುಂದಿನ ದಿನಗಳಲ್ಲಿ ಪತ್ರಕರ್ತರೆ ಬೀದಿಗಿಳಿಯುವುದರಲ್ಲಿ ಅನುಮಾನವಿಲ್ಲ ಎಂದಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *