ಪಶ್ಚಿಮ ನೇಪಾಳ ಮತ್ತು ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಉತ್ತರ ಭಾರತದ ಅನೇಕ ಜಿಲ್ಲೆಗಳಲ್ಲಿ ಭೂಮಿ ಸಂಭವಿಸಿದೆನೇಪಾಳ ಮತ್ತು ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಸುಮಾರು 20 ರಿಂದ 40 ಸೆಕೆಂಡುಗಳ ಕಾಲ ಭೂಕಂಪನದ ಅನುಭವವಾಗಿದೆ.

ಭೂಕಂಪದ ಕೇಂದ್ರಬಿಂದು ನೇಪಾಳದಲ್ಲಿ ಕಂಡು ಬಂದಿದೆ. ಭೂಮಿಯ ತೀವ್ರ ಕಂಪನದಿಂದಾಗಿ ಜನರಲ್ಲಿ ಭೀತಿ ಉಂಟಾಗಿದ್ದು, ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಬಹಳ ಸಮಯದವರೆಗೆ ನಡುಕ ಅನುಭವಿಸಿದ್ದೇವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.4 ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲ, ಪಶ್ಚಿಮ ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಕನಿಷ್ಠ 69 ಮಂದಿ ಸಾವನ್ನಪ್ಪಿದ್ದಾರೆ.

ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಭಾರತ-ನೇಪಾಳ ಗಡಿಯಲ್ಲಿರುವ ಕತಿಹಾರ್, ಮೋತಿಹಾರಿ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಕಂಪನದ ಅನುಭವವಾಗಿದೆ.

ನೇಪಾಳದಲ್ಲಿ 69 ಜನ ಸಾವು: ಪಶ್ಚಿಮ ನೇಪಾಳದಲ್ಲಿ ಸಂಭವಿಸಿದ ಭಾರೀ ಭೂಕಂಪದಿಂದಾಗಿ ಇಲ್ಲಿಯವರೆಗೆ 69 ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕಂಪದಿಂದ ಹಲವು ಮನೆಗಳು ಧ್ವಂಸಗೊಂಡಿವೆ.

ರುಕುಮ್ ವೆಸ್ಟ್‌ನಲ್ಲಿ 35 ಜನರು ಸಾವನ್ನಪ್ಪಿದ್ದಾರೆ ಎಂದು ನೇಪಾಳಿ ಅಧಿಕಾರಿಗಳು ದೃಢಪಡಿಸಿದ್ದಾರೆ, ಜಜರ್ಕೋಟ್ ಜಿಲ್ಲೆಯಲ್ಲಿ ಇದುವರೆಗೆ 34 ಜನರು ಸಾವನ್ನಪ್ಪಿದ್ದಾರೆ. ಭೂಕಂಪದ ನಂತರ ರಕ್ಷಣಾ ಪಡೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *